
ಮಂಗಳೂರು: ಧರ್ಮಸ್ಥಳದಲ್ಲಿ(Dharmasthala) ನಡೆದಿದೆ ಎನ್ನಲಾದ ಘಟನೆಯ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ (SIT)(ವಿಶೇಷ ತನಿಖಾ ದಳ) ತಂಡವು, ಪ್ರಕರಣದ ದೂರುದಾರ-ಸಾಕ್ಷಿಯು ತಮಿಳುನಾಡಿನಲ್ಲಿ ತನ್ನನ್ನು ಗುಂಪೊಂದು ಸಂಪರ್ಕಿಸಿತ್ತು ಎಂಬ ಹೇಳಿಕೆಯನ್ನು ನಿರಾಕರಿಸಿದೆ. ಈ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಎಸ್ಐಟಿ ಸ್ಪಷ್ಟಪಡಿಸಿದೆ(Dharmasthala case SIT clarification)
ಇದನ್ನೂ ಓದಿ: How to Identify Fresh Fish: ಮೀನು ಖರೀದಿಸುವಾಗ ತಾಜಾ ಮೀನುಗಳನ್ನು ಗುರುತಿಸುವುದು ಹೇಗೆ?, ಈ ಟಿಪ್ಗಳನ್ನು ಫಾಲೋ ಮಾಡಿ
ಹಿಂದೆ ದೂರುದಾರರು, 2014ರ ನಂತರ ತಾನು ತಮಿಳುನಾಡಿನಲ್ಲಿ ವಾಸವಿದ್ದಾಗ 2023ರಲ್ಲಿ ಒಂದು ಗುಂಪು ತನ್ನನ್ನು ಸಂಪರ್ಕಿಸಿತ್ತು ಮತ್ತು ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ಪ್ರಶ್ನಿಸಿತ್ತು ಎಂದು ಹೇಳಿರುವ ಬಗ್ಗೆ ವರದಿಗಳು ಹರಿದಾಡಿದ್ದವು. ಈ ಗುಂಪು ತಮಗೆ ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹೇರಿತ್ತು ಎಂದೂ ದೂರುದಾರರು ಹೇಳಿದ್ದರು ಎಂದು ಮಾಧ್ಯಮ ವರದಿಗಳಲ್ಲಿ ಉಲ್ಲೇಖಿಸಲಾಗಿತ್ತು.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್ಐಟಿ(SIT) ಅಧಿಕಾರಿಗಳು, ವಿಚಾರಣೆ ವೇಳೆ ದೂರುದಾರರು ಇಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. “ದೂರುದಾರರಿಂದ ನಮಗೆ ಇಂತಹ ಯಾವುದೇ ಹೇಳಿಕೆ ಸಿಕ್ಕಿಲ್ಲ. ನಾವು ಈಗ ಅವರನ್ನೊಬ್ಬ ದೂರುದಾರನಾಗಿ ಪರಿಗಣಿಸುತ್ತಿದ್ದೇವೆ ಮತ್ತು ಸೆಕ್ಷನ್ 164ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದೇವೆ” ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Blood Pressure: ರಕ್ತದೊತ್ತಡವನ್ನು ಹಗುರವಾಗಿ ಪರಿಗಣಿಸಬೇಡಿ, ನಿಮ್ಮ ಜೀವವೇ ಹೋಗುತ್ತೆ
ಪ್ರಸ್ತುತ, ದೂರುದಾರರು ನೀಡಿರುವ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಕೆಲಸ ನಡೆಯುತ್ತಿದೆ. ದೂರುದಾರರೊಂದಿಗೆ ಕೆಲಸ ಮಾಡಿದ ಇತರ ವ್ಯಕ್ತಿಗಳು, ಆಗಿನ ಗ್ರಾಮ ಪಂಚಾಯತ್ ಅಧಿಕಾರಿಗಳು, ಹಾಗೂ 1994ರಿಂದ 2014ರ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಯ ಹೇಳಿಕೆಗಳನ್ನು ಪಡೆಯಲಾಗುತ್ತಿದೆ.
ಅದೇ ರೀತಿ, ಎಸ್ಐಟಿ ಯೂಟ್ಯೂಬರ್ಗಳಿಗೆ ನೋಟಿಸ್ ನೀಡಿದೆ ಎಂಬ ವರದಿಗಳನ್ನೂ ಅಧಿಕಾರಿಗಳು ನಿರಾಕರಿಸಿದ್ದಾರೆ. “ನಾವು ಯಾವುದೇ ಯೂಟ್ಯೂಬರ್ಗಳಿಗೆ ನೋಟಿಸ್ ನೀಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೂರುದಾರರು ಹೇಳಿರುವ ತಲೆಬುರುಡೆ ಮತ್ತು ಇತರೆ ಸ್ಥಳಗಳ ಬಗ್ಗೆಯೂ ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಮಂಗಳವಾರ ದೂರುದಾರರು ಹಾಗೂ ಕೆಲವು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
