Sabarimala Case Update: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ, ತಿರುವಾಂಕೂರು ದೇವಸ್ವಂ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ.(Sabarimala Case Update)ಭಕ್ತರ ಭಾವನೆಗಳನ್ನು ಹಾಗೂ ದೇವಾಲಯದ ಸಂಪ್ರದಾಯಗಳನ್ನು ರಕ್ಷಿಸುವ ನಿಲುವನ್ನು ಮಂಡಳಿ ಸ್ಪಷ್ಟಪಡಿಸಿದ್ದು, ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದೆ.
ವಿವಾದಕ್ಕೆ ಕಾರಣವೇನು?
ಶಬರಿಮಲೆ ಅಯ್ಯಪ್ಪ ದೇವಸ್ಥಾನವು(Shabari Mala Ayyappa Swamy) ದೇಶದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿ ವರ್ಷ. ವಿಶೇಷವಾಗಿ ನವೆಂಬರ್ನಿಂದ ಜನವರಿ ತಿಂಗಳವರೆಗೆ, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುತ್ತಾರೆ. ಮಕರ ಸಂಕ್ರಾಂತಿಯ ಸಮಯದಲ್ಲಿ ನಡೆಯುವ ‘ಮಕರ ಜ್ಯೋತಿ’ ದರ್ಶನವು ಭಕ್ತರ ಪಾಲಿಗೆ ಬಹಳ ಮಹತ್ವದ್ದಾಗಿದೆ.
ಇದನ್ನೂ ಓದಿ: ಪ್ರಾಚೀನ ಭಾರತದ ಎಂಜಿನಿಯರಿಂಗ್ ವೈಭವ: ಆಧುನಿಕ ವಿಜ್ಞಾನಕ್ಕೂ ಸವಾಲೆಸೆಯುವ ದೇವಾಲಯಗಳು
ಆದರೆ, ಈ ದೇವಾಲಯದಲ್ಲಿ 10 ವರ್ಷದಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ಈ ನಿರ್ಬಂಧದ ವಿರುದ್ಧ ಹಲವು ವರ್ಷಗಳಿಂದ ಕಾನೂನು ಹೋರಾಟ ನಡೆಯುತ್ತಿತ್ತು. 2018ರಲ್ಲಿ, ಸುಪ್ರೀಂ ಕೋರ್ಟ್ ಮಹಿಳೆಯರ ಪ್ರವೇಶಕ್ಕೆ ಇದ್ದ ನಿಷೇಧವನ್ನು ರದ್ದುಗೊಳಿಸಿ. ಇದು ಸಂವಿಧಾನ ವಿರೋಧಿ ಎಂದು ತೀರ್ಪು ನೀಡಿತ್ತು ಆದಾಗ್ಯೂ, ಈ ತೀರ್ಪಿನ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದ ಕಾರಣ ಪ್ರಕರಣವನ್ನು ಈಗ ಸುಪ್ರೀಂ ಕೋರ್ಟ್ ವಿಸ್ತೃತ ಪೀಠವು ಪುನಃ ಪರಿಶೀಲಿಸುತ್ತಿದೆ.
ದೇವಸ್ವಂ ಮಂಡಳಿಯ ಹೊಸ ನಿರ್ಧಾರ
ಈ ಸಂದರ್ಭದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಶಬರಿಮಲೆ ದೇವಾಲಯದ ಆಚಾರಗಳನ್ನು ಮತ್ತು ಭಕ್ತರ ಮನೋಭಾವಗಳನ್ನು ಗೌರವಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಹೊಸ ಅಫಿಡವಿಟ್ ಅನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲು ಮಂಡಳಿ ನಿರ್ಧರಿಸಿದೆ.
ಹೊಸ ಅಫಿಡವಿಟ್ನಲ್ಲಿ ಮಂಡಳಿಯ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ಪ್ರಶಾಂತ್ ಹೇಳಿದ್ದಾರೆ. ಇದು ದೇವಾಲಯದ ಆಡಳಿತ ಮತ್ತು ಭಕ್ತರ ನಡುವಿನ ಸಂಪ್ರದಾಯಗಳನ್ನು ಎತ್ತಿಹಿಡಿಯುವ ಪ್ರಯತ್ನವಾಗಿದೆ. ಮಂಡಳಿಯ ಈ ನಿಲುವು. ಈ ಹಿಂದಿನ ನಿರ್ಧಾರಗಳಿಗೆ ಹೋಲಿಸಿದರೆ ಮಹತ್ವದ ಬದಲಾವಣೆಯನ್ನು ಸೂಚಿಸುತ್ತದೆ.
